ಬಂಟ್ವಾಳ, ಜ 17 (DaijiworldNews/SM): ಬಿಸಿರೋಡಿನ ಹೃದಯ ಭಾಗದಲ್ಲಿನ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಬಂಟ್ವಾಳ ನಗರ ಠಾಣಾ ಎಸ್.ಐ.ಅವಿನಾಶ್ ನೇತ್ರತ್ವದ ತಂಡ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು, ಯುವತಿಯರನ್ನು ರಕ್ಷಣೆ ಮಾಡಿದ್ದಾರೆ.

ಬಿಸಿರೋಡಿನ ಮುಖ್ಯ ವೃತ್ತದ ಬಳಿಯಲ್ಲಿರುವ ಮನೆಯೊಂದರಲ್ಲಿ ವೇಶ್ಯಾವಟಿಕೆ ನಡೆಸಲಾಗುತ್ತಿದೆ ಎಂಬ ಮಾಹಿತಿಯ ಮೇರೆಗೆ ಎಸ್.ಐ. ಅವಿನಾಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ದಾಳಿಯ ವೇಳೆ ನಾಲ್ವರು ಯುವಕರನ್ನು ವಶಕ್ಕೆ ಪಡೆದುಕೊಂಡು ಐದು ಮಂದಿ ಯುವತಿಯರನ್ನು ರಕ್ಷಣೆ ಮಾಡಿದ್ದಾರೆ.
ಇನ್ನು ಒಟ್ಟು ಒಂಬತ್ತು ಮಂದಿಯನ್ನು ಠಾಣೆಗೆ ಕರದೊಯ್ಯಲಾಗಿದ್ದು ತನಿಖೆ ಮುಂದುವರಿದಿದೆ.