ಮಂಗಳೂರು, ಜ.22 (DaijiworldNews/PY): 2020ರ ಡಿ.9ರಂದು ಸುಂಕದಕಟ್ಟೆ ಶ್ರೀ ನಿರಂಜನ ಸ್ವಾಮಿ ಪಾಲಿಟೆಕ್ನಿಕ್ ಕಾಲೇಜಿನ ಕಚೇರಿಯ ಬೀಗ ಮುರಿದು ಕಪಾಟಿನಲ್ಲಿದ್ದ 5.41 ಲಕ್ಷ ರೂ. ಕಳವು ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.

ಸಾಂದರ್ಭಿಕ ಚಿತ್ರ
ಬಂಧಿತ ಆರೋಪಿಯನ್ನು ವಾಮಂಜೂರು ತಿರುವೈಲು ಗ್ರಾಮದ ನಿವಾಸಿ ಆರೀಫ್ (26) ಎಂದು ಗುರುತಿಸಲಾಗಿದೆ.
ಆರೋಪಿಯ ಮೇಲೆ ಈಗಾಗಲೇ ಕಳ್ಳತನ, ದರೋಡೆ, ಕೊಲೆ ಯತ್ನ ಹಾಗೂ ಎಟಿಎಂ ಕಳವಿಗೆ ಸಂಬಂಧಿಸಿದಂತೆ ಮೂಡುಬಿದಿರೆ ಠಾಣೆಯಲ್ಲಿ ಏಳು ಪ್ರಕರಣ, ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ನಾಲ್ಕು, ಕಾವೂರು ಹಾಗೂ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ 2, ಬಂಟ್ವಾಳ ನಗರ, ಗ್ರಾಮಾಂತರ ಹಾಗೂ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ಸೇರಿ ಒಟ್ಟು 18 ಪ್ರಕರಣಗಳು ದಾಖಲಾಗಿವೆ.