ಬಂಟ್ವಾಳ, ಜ 28 (DaijiworldNews/SM): ಪಾಣೆಮಂಗಳೂರು ಬಳಿ ರಸ್ತೆ ದಾಟಲು ನಿಂತಿದ್ದ ಪಾದಚಾರಿಯೊಬ್ಬರಿಗೆ ಇಕೋ ಕಾರು ಢಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟ ಘಟನೆ ಗುರುವಾರ ರಾತ್ರಿ ನಡೆದಿದೆ.

ಶಂಭೂರು ನಿವಾಸಿ ಸಂಜೀವ (70) ಘಟನೆಯಲ್ಲಿ ಮೃತಪಟ್ಟವರು. ಅಪಘಾತ ನಡೆದ ಸ್ಥಳದಿಂದ ಆಸ್ಪತ್ರೆಗೆ ಸಾಗಿಸುವ ವೇಳೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.