ಪುತ್ತೂರು, ಫೆ. 05 (DaijiworldNews/SM): ತಾಲೂಕಿನ ಮುರ ಎಂಬಲ್ಲಿ ನಡೆದ ಬೈಕ್ ಹಾಗೂ ಆಟೋ ರಿಕ್ಷಾ ನಡುವಿನ ಭೀಕರ ಅಪಘಾತವೊಂದರಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ.



ಮೃತಪಟ್ಟ ಯುವಕನನ್ನು ಬನ್ನೂರು ನಿವಾಸಿ ಅಭಿನವ್ ಎಂದು ಗುರುತಿಸಲಾಗಿದೆ. ಈತ ಕೆ.ವಿ.ಜಿ ಕಾಲೇಜಿನ ವಿದ್ಯಾರ್ಥಿ ಯಾಗಿದ್ದಾನೆ ಎಂದು ತಿಳಿದು ಬಂದಿದೆ. ಪುತ್ತೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.