ಉಡುಪಿ, ಫೆ.15 (DaijiworldNews/HR): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಉಡುಪಿ ಇವರ ಸಹಯೋಗದಲ್ಲಿ ಸರ್ಕಾರಿ ಬಾಲಕಿಯರ ಬಾಲಮಂದಿರದ ಮಕ್ಕಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ನಡೆಯಿತು.



ಮಕ್ಕಳ ಕಲ್ಯಾಣ ಸಮಿತಿ ನಿಟ್ಟೂರು ಇದರ ಅಧ್ಯಕ್ಷ ರೊನಾಲ್ಡ್ ಫುರ್ಟಾಡೋ ಕಾರ್ಯಕ್ರಮ ಉದ್ಘಾಟಿಸಿ ಬಳಿಕ ಮಾತನಾಡಿದ ಅವರು, "ಮಕ್ಕಳು ದೇಶದ ಸಂಪತ್ತು ಅವರು ಕಲಿಕೆಯೊಂದಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡುತ್ತಿರವುದು ಸ್ವಾಗತಾರ್ಹವಾಗಿದ್ದು, ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳಲಿ" ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸದಾನಂದ ನಾಯಕ್, "ಮಕ್ಕಳು ಕಲಿಕೆಯೊಂದಿಗೆ ಕೌಶಲಾಭಿವೃದ್ದಿಯಂತಹ ತರಬೇತಿ ಪಡೆದು ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ ಹೊರಬನ್ನಿ" ಎಂದು ಕರೆ ನೀಡಿದರು.
ಮುಖ್ಯ ಅಥಿತಿಗಳಾಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಭಾಸ್ಕರ್.ಎ ಅಮೀನ್, ಸೃಷ್ಟಿ ಇನ್ಫೋಟೆಕ್ ಕುಂದಾಪುರದ ಮುಖ್ಯಸ್ಥ ಹರ್ಷ ವರ್ಧನ್ ಶೆಟ್ಟಿ ಉಪಸ್ಥಿತರಿದ್ದರು .
ಬಾಲಕಿಯರ ಬಾಲಮಂದಿರದ ಮಕ್ಕಳಿಗೆ ಒಂದು ತಿಂಗಳು ಕಂಪ್ಯೂಟರ್, ಟೈಲರಿಂಗ್ ಮತ್ತು ಬ್ಯುಟಿಷಿಯನ್ ತರಬೇತಿಯನ್ನು ಸೃಷ್ಟಿ ಇನ್ಫೋಟೆಕ್ ಕುಂದಾಪುರ ಇವರು ನೀಡಲಿದ್ದಾರೆ.