ಮಂಗಳೂರು, ಫೆ.22 (DaijiworldNews/PY): ಕೇರಳದಿಂದ ಬರುವ ಪ್ರಯಾಣಿಕರನ್ನು ತಪಾಸಣೆ ಮಾಡಲು ಫೆ.22ರ ಸೋಮವಾರದಿಂದ ತಲಪಾಡಿಯಲ್ಲಿ ಕೊರೊನಾ ಚೆಕ್ ಪೋಸ್ಟ್ ಅನ್ನು ಪುನರಾರಂಭಿಸಲಾಗಿದೆ.




">





ತಹಶೀಲ್ದಾರ್, ಜಿಲ್ಲಾ ಆರೋಗ್ಯ ಅಧಿಕಾರಿ ಹಾಗೂ ಪೊಲೀಸರು ಕೇರಳದಿಂದ ಬರುವವರ ವಿಚಾರಣೆ ನಡೆಸುತ್ತಿದ್ದಾರೆ.
"ಕೇರಳದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ದ.ಕ ಜಿಲ್ಲಾಡಳಿತ ಫೆ.21ರಂದು ಗಡಿಗಳನ್ನು ಬಂದ್ ಮಾಡಿದೆ. ಮಂಗಳೂರು ಸಂಪರ್ಕಿಸುವ ತಲಪಾಡಿ, ಸಾರಡ್ಕ, ಸುಳ್ಯದ ಜಾಲ್ಸೂರು, ಪುತ್ತೂರಿನ ನೆಟ್ಟಣಿಗೆ ಮುಡ್ನೂರು, ಮೇಣಾಲ ಗಡಿಗಳಲ್ಲಿ ಮಾತ್ರ ದ.ಕ. ಜಿಲ್ಲೆಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಉಳಿದಂತೆ ಇತರ ಗಡಿಗಳ ಮೂಲಕ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ" ಎಂದು ಜಿಲ್ಲಾಡಳಿತ ಹೇಳಿದೆ.
"ಪ್ರಯಾಣಕ್ಕೆ ಅವಕಾಶ ನೀಡಿರುವ ಐದು ಗಡಿಗಳಲ್ಲಿ ದ.ಕ ಜಿಲ್ಲೆಗೆ ಆಗಮಿಸುವವರಿಗೆ ಕೊರೊನಾ ನೆಗೆಟಿವ್ ಪ್ರಮಾಣ ಪತ್ರವನ್ನು ಕಡ್ಡಾಯಗೊಳಿಸಿದೆ. 72 ಗಂಟೆಯೊಳಗೆ ನಡೆಸಿದ ಪರೀಕ್ಷಾ ವರದಿ ಕಡ್ಡಾಯವಾಗಿದೆ. 72 ಗಂಟೆ ಮೀರಿದ ವರದಿ ಪರಿಗಣಿಸಲಾಗುವುದಿಲ್ಲ" ಎಂದು ಜಿಲ್ಲಾಡಳಿತ ಸೂಚಿಸಿದೆ.