ಉಡುಪಿ, ಫೆ.24 (DaijiworldNews/PY): ಶಾಸಕ ಕೆ. ರಘುಪತಿ ಭಟ್ ನೇತೃತ್ವದ ಆಸರೆ ಚಾರಿಟೇಬಲ್ ಟ್ರಸ್ಟ್ (ರಿ.) ಕಡಿಯಾಳಿ ಉಡುಪಿ ಇದರ ವತಿಯಿಂದ ಶಾಸಕ ಕೆ ರಘುಪತಿ ಭಟ್ ಅವರ ಜನ್ಮದಿನದ ಪ್ರಯುಕ್ತ ಸುಬ್ರಹ್ಮಣ್ಯನಗರ ವಾರ್ಡ್ನ ಕೊರಗ ಸಮುದಾಯದ ನರ್ಸಿ ಎಂಬುವವರ ಮನೆಗೆ ವಿದ್ಯುತ್ ಸಂಪರ್ಕ ಒದಗಿಸಲಾಗಿದ್ದು, ಫೆ.24ರ ಬುಧವಾರದಂದು ಶಾಸಕ ಕೆ ರಘುಪತಿ ಭಟ್ ಅವರು ಚಾಲನೆ ನೀಡಿದರು.



ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಲ್ವಿನ್ ಡಿಸೋಜ, ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಸ್ಥಳೀಯ ನಗರಸಭಾ ಸದಸ್ಯ ಜಯಂತಿ, ಬಾಲಕೃಷ್ಣ ಶೆಟ್ಟಿ, ನಗರ ಸಭೆಯ ನಾಮ ನಿರ್ದೇಶಿತ ಸದಸ್ಯ ಸುಬೇದ, ಶಾಸಕರ ಧರ್ಮಪತ್ನಿ ಶಿಲ್ಪಾ ಆರ್. ಭಟ್, ಪುತ್ರ ರೆಯ್ಯಾನ್ಶ್ ಮತ್ತು ಕಂದಾಯ ನಿರೀಕ್ಷಕ ಉಪೇಂದ್ರ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.