ಮಂಗಳೂರು, ಮಾ.05 (DaijiworldNews/HR): ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್ಡಿಎಂ) ಕಾಲೇಜಿನ ಹಿರಿಯ ವಿದ್ಯಾರ್ಥಿನಿಯೊಬ್ಬರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆಂದು ತಿಳಿದು ಬಂದಿದೆ.

ಮೃತರನ್ನು ಶ್ರೇಯಾ ರೈ ಎಂದು ಗುರುತಿಸಲಾಗಿದೆ.
ಶ್ರೇಯಾ ಅವರು 7 ತಿಂಗಳ ಗರ್ಭಿಣಿಯಾಗಿದ್ದು, ಪ್ರಸ್ತುತ ದುಬೈನಲ್ಲಿ ವಾಸವಾಗಿದ್ದ ಅವರಿಗೆ ಕೆಲ ದಿನಗಳ ಹಿಂದೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಕೂಡಲೇ ಅವರು ದುಬೈನಲ್ಲಿರುವ ಪ್ರಸಿದ್ಧ ಆಸ್ಪತ್ರೆಯೊಂದರಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಇಂದು ಬೆಳಗ್ಗಿನ ಜಾವ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ.
ಇನ್ನು ಶ್ರೇಯಾ ಅವರು ಚಿಕ್ಕಮಗಳೂರು ಕಳಸ ಮೂಲದವರಾಗಿದ್ದು, ತಮ್ಮ ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಎಸ್ಡಿಎಂ ಕಾಲೇಜಿನಲ್ಲಿ ಮುಗಿಸಿದ್ದಾರೆ. ಬಳಿಕ ಪಡುಬಿದ್ರಿ ಮೂಲ ಪವನ್ ಶೆಟ್ಟಿಯನ್ನು ಮದುವೆಯಾಗಿ ಪತಿಯೊಂದಿಗೆ ದುಬೈನಲ್ಲಿ ನೆಲೆಸಿದ್ದರು.