ಮಂಗಳೂರು, ಮಾ 08 (DaijiworldNews/MS): ನಗರದ ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಅವಘಡ ಸಂಭವಿಸಿ ಯುವಕನೋರ್ವ ಮೃತಪಟ್ಟ ಘಟನೆ ಮಾ.8 ರ ಸೋಮವಾರ ನಡೆದಿದೆ. ಮೃತ ಯುವಕನನ್ನು ಕೋಟೆಕಾರ್ ಬೀರಿ ನಿವಾಸಿ ಅನೀಶ್ (20) ಎಂದು ತಿಳಿದುಬಂದಿದೆ.

ವೆನ್ಲಾಕ್ ನ ಕ್ಯಾಂಟೀನ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದಾಗ ವಿದ್ಯುತ್ ಅವಘಡ ಸಂಭವಿಸಿ ಯುವಕ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. . ಮೃತ ಯುವಕನು ಕೆಪಿಟಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಾ ವೆನ್ಲಾಕ್ ಆಸ್ಪತ್ರೆಯಲ್ಲಿ ಕೆಲಸ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ.
ಕ್ಯಾಂಟೀನ್ ಕಟ್ಟಡವು ಅವ್ಯವಸ್ಥೆಯ ಅಗಾರವಾಗಿದ್ದು, ಅನೀಶ್ ಅಧಿಕಾರಿಗಳ ನಿರ್ಲಕ್ಷ್ಯದಿಂದ ಬಲಿಯಾಗಿದ್ದಾನೆ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ.
ಈ ಬಗ್ಗೆ ಮಂಗಳೂರು ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.