ಉಡುಪಿ,ಮಾ.13 (DaijiworldNews/HR): ಕುಟುಂಬ ನ್ಯಾಯಾಲಯಗಳ ಕಾನೂನಿನ ಮುಖ್ಯ ಉದ್ದೇಶ ಕುಟುಂಬ ವ್ಯವಸ್ಥೆಯನ್ನು ಕಾಪಾಡುವುದು ಮತ್ತು ಕುಟುಂಬ ಕಲಹಗಳಲ್ಲಿ ಮಹಿಳೆಯರ ಮತ್ತು ಮಕ್ಕಳ ಮೂಲ ಹಿತರಕ್ಷಣೆ ಮಾಡುವುದಾಗಿದೆ. ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಲು ಮೊದಲ ಆದ್ಯತೆ ನೀಡಬೇಕು ಎಂದು ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ ಹೇಳಿದ್ದಾರೆ.

ಉಡುಪಿಯಲ್ಲಿ ಕುಟುಂಬ ನ್ಯಾಯಾಲಯವನ್ನು ವೀಡಿಯೋ ಕಾನ್ಪರೆನ್ಸ್ ಮೂಲಕ (ವರ್ಚುವಲ್) ಶನಿವಾರ ಉದ್ಘಾಟಿಸಿ ಮಾತನಾಡಿದ ಅವರು, "ಉಚ್ಛ ನ್ಯಾಯಾಲಯದ ನ್ಯಾಾಯಮೂರ್ತಿಗಳು, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಕಾರಿ ಅಧ್ಯಕ್ಷ ಅರವಿಂದ ಕುಮಾರ್ ಮಾತನಾಡಿ, ಕುಟುಂಬ ನ್ಯಾಯಾಲಯಗಳಲ್ಲಿ ಪ್ರಕರಣಗಳನ್ನು ತ್ವರಿತಗತಿಯಲ್ಲಿ ಬಗೆಹರಿಸಲು ಆದ್ಯತೆ ನೀಡಬೇಕು. ವಕೀಲರಾಗಿ ಜನಸಾಮಾನ್ಯರ ಕಷ್ಟಕಾರ್ಪಣ್ಯಗಳನ್ನು ನಿವಾರಿಸಲು ತ್ವರಿತಗತಿಯ ಸ್ಪಂದನೆ ಅತ್ಯಗತ್ಯವಾಗಿದೆ. ಅನ್ಯಾಯಕ್ಕೊಳಗಾದ ಪ್ರತಿಯೊಬ್ಬರಿಗೂ ತಾರತಮ್ಯವಿಲ್ಲದೆ ನ್ಯಾಯ ಒದಗಿಸುವ ಕೆಲಸವಾಗಬೇಕು" ಎಂದರು.
ಹೈಕೋರ್ಟ್ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಮಾತನಾಡಿ, "ಕುಟುಂಬ ಕಲಹಗಳನ್ನು ತಮ್ಮೊಳಗೆ ಬಗೆಹರಿಸುವ ವೇದಿಕೆಯನ್ನು ಕಲ್ಪಿಸಬೇಕು. ಸರಿ-ತಪ್ಪುುಗಳ ಬಗ್ಗೆ ಮನವರಿಕೆ ಮಾಡುವ ಮೂಲಕ ಪ್ರಕರಣಗಳ ಇತ್ಯರ್ಥಕ್ಕೆ ಮೊದಲ ಆದ್ಯತೆ ನೀಡಬೇಕು" ಎಂದರು.
ಉಡುಪಿ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಮಾತನಾಡಿ, "ಉಡುಪಿಯಲ್ಲಿ ವಕೀಲರ ಸಂಘದ ಬೇಡಿಕೆಯಂತೆ ಕುಟುಂಬ ನ್ಯಾಯಾಲಯದ ಉದ್ಘಾಟನೆ ನೆರವೇರಿದೆ. ಇದು ಗ್ರಾಹಕಸ್ನೇಹಿ ಕೋರ್ಟ್ನಂತೆ ಕಾರ್ಯನಿರ್ವಹಿಸಬೇಕು. ಕೋರ್ಟ್ ಎಂದರೆ ಜನರು ಭಯಭೀತರಾಗದೆ ವಿಶ್ವಾಸದಿಂದ ಆಗಮಿಸುವಂತಾಗಬೇಕು" ಎಂದು ಹೇಳಿದರು.
ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ರೆನೋಲ್ಡ್ ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು.
ಉಡುಪಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಾಯಾಧೀಶ ಸುಬ್ರಹ್ಮಣ್ಯ ಜೆ.ಎನ್. ಸ್ವಾಗತಿಸಿದರು. ಹಿರಿಯ ಸಿವಿಲ್ ನ್ಯಾಾಯಾಧೀಶೆ, ಜಿಲ್ಲಾಾ ಕಾನೂನು ಸೇವೆಗಳ ಪ್ರಾಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ ಕಾರ್ಯಕ್ರಮ ನಿರೂಪಿಸಿದರು. ವಕೀಲರ ಸಂಘದ ಅಧ್ಯಕ್ಷ ದಿವಾಕರ ಎಂ. ಶೆಟ್ಟಿ ವಂದಿಸಿದರು.