ಕಾರ್ಕಳ, ಮಾ. 21 (DaijiworldNews/SM): ಕುಕ್ಕುಂದೂರು ಅಯ್ಯಪ್ಪ ನಗರ ಎಂಬಲ್ಲಿ ರವಿವಾರ ಮಧ್ಯಾಹ್ನದ ವೇಳೆಗೆ ಮನೆಯೊಂದಕ್ಕೆ ನುಗ್ಗಿದ ದುಷ್ಕರ್ಮಿಗಳು ಲಕ್ಷಾಂತರ ಬೆಲೆಬಾಳುವ ನಗನಗದು ಕಳವುಗೈದ ಘಟನೆ ನಡೆದಿದೆ.

ಅಯ್ಯಪ್ಪನಗರದ ಸಂದೀಪ್ ಜೈನ್ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆ ಮಂದಿಯರು ಮಧ್ಯಾಹ್ನ 12ರ ವೇಳೆಗೆ ಕೋಲಕ್ಕೆ ಹೋಗಿದ್ದು, ಮಧ್ಯಾಹ್ನ ೨ರ ವೇಳೆಗೆ ಹಿಂತಿರುಗಿದ್ದ ಸಂದರ್ಭದಲ್ಲಿ ಈ ಕೃತ್ಯ ನಡೆದಿದೆ. ಮನೆಗೆ ನುಗ್ಗಿದವರು ೫೫ ಪವನ್ ಚಿನ್ನಾಭರಣ ಹಾಗೂ ೬೦ ಪವನ್ ನಗದು ಕಳವುಗೈದು ಹೋಗಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸ್ ಶ್ವಾನದಳ, ಬೆರಳಚ್ಚು ತಜ್ಞರುಅಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ. ಡಿವೈಎಸ್ಪಿ ಭರತ್ ರೆಡ್ಡಿ, ವೃತ್ತ ನಿರೀಕ್ಷಕ ಸಂಪತ್ ಕುಮಾರ್, ನಗರ ಠಾಣಾಧಿಕಾರಿ ಮಧು, ಗ್ರಾಮಾಂತರ ಠಾಣಾಧಿಕಾರಿ ತೇಜಸ್ವಿ ಮೊದಲಾದವರು ಘಟನಾ ಸ್ಥಳಕ್ಕೆ ಅಗಮಿಸಿದ್ದಾರೆ.
ಈ ಕುರಿತು ನಗರ ಠಾಣೆಯಲ್ಲಿ ಕೇಸುದಾಖಲಾಗಿದೆ.