ಉಡುಪಿ, ಮಾ.23 (DaijiworldNews/PY): "ಜಿಲ್ಲೆಯಲ್ಲಿ ಕೊರೊನಾದ ಎರಡನೇ ಅಲೆಯು ಪ್ರಾರಂಭವಾಗುತ್ತಿದ್ದು, ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದ್ದರೂ ಸಹ ಸಾರ್ವಜನಿಕರು ಕೊರೊನಾ ಸುರಕ್ಷತಾ ಕ್ರಮಗಳಾದ ಮಾಸ್ಕ್ ಧರಿಸದಿರುವುದು, ಸಾಮಾಜಿಕ ಅಂತರಪಾಲನೆ ಮಾಡದೇ ಇರುವುದು ಕಂಡು ಬರುತ್ತಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ದಂಡ ಪ್ರಕರಣಗಳನ್ನು ಹೆಚ್ಚು ಮಾಡಬೇಕು" ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚನೆ ನೀಡಿದ್ದಾರೆ.
![](https://daijiworld.ap-south-1.linodeobjects.com/iWeb/tvdaijiworld/img_tv247/PY-230321-dc1.jpg)
![](https://daijiworld.ap-south-1.linodeobjects.com/iWeb/tvdaijiworld/img_tv247/PY-230321-dc2.jpg)
![](https://daijiworld.ap-south-1.linodeobjects.com/iWeb/tvdaijiworld/img_tv247/PY-230321-dc3.jpg)
![](https://daijiworld.ap-south-1.linodeobjects.com/iWeb/tvdaijiworld/img_tv247/PY-230321-dc4.jpg)
![](https://daijiworld.ap-south-1.linodeobjects.com/iWeb/tvdaijiworld/img_tv247/PY-230321-dc5.jpg)
![](https://daijiworld.ap-south-1.linodeobjects.com/iWeb/tvdaijiworld/img_tv247/PY-230321-dc6.jpg)
ಅವರು ಮಂಗಳವಾರ, ಜಿಲ್ಲೆಯ ಎಲ್ಲಾ ತಹಸೀಲ್ದಾರ್ಗಳು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಇಂಜಿನಿಯರ್ಗಳು, ಉಡುಪಿ ನಗರಸಭೆಯ ಪೌರಾಯುಕ್ತರು, ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರುಗಳಿಗೆ ಝೂಮ್ ಮೀಟಿಂಗ್ ಮೂಲಕ ಸಭೆ ನಡೆಸಿ, "ತಮ್ಮ ವ್ಯಾಪ್ತಿಯಲ್ಲಿ ಸುರಕ್ಷಾ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ದಂಡ ವಿಧಿಸುವ ಪ್ರಕರಣಗಳನ್ನು ಹೆಚ್ಚು ಮಾಡುಬೇಕು" ಎಂದು ಸೂಚನೆ ನೀಡಿದರು.
"ಸರ್ಕಾರದ ಸುತ್ತೋಲೆಯಲ್ಲಿ ತಿಳಿಸಿರುವಂತೆ, ಸಾಮಾಜಿಕ ಪಾಲನೆ ಕುರಿತಂತೆ ವಿವಿಧ ಮಾಲ್ಗಳು, ಹಾಲ್ಗಳು ಸೇರಿದಂತೆ ವಿವಿಧ ಸ್ಥಳಗಳಲ್ಲಿ ನಡೆಯುವ ಸಮಾರಂಭಗಳಲ್ಲಿ ನಿಗಧಿಪಡಿಸಿರುವ ಸಂಖ್ಯೆಗಿಂತ ಹೆಚ್ಚಿನ ಸಾರ್ವಜನಿಕರು ಸೇರಿದ್ದರೆ ಸಂಬಂಧಪಟ್ಟವರ ವಿರುದ್ಧ ಸುತ್ತೋಲೆಯಂತೆ ಸೂಕ್ತ ಕ್ರಮ ಕೈಗೊಳ್ಳಿ. ಸುರಕ್ಷಾ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ದ ದಂಢ ವಿಧಿಸುವ ಅಧಿಕಾರವನ್ನು ವಿವಿಧ ಅಧಿಕಾರಿಗಳಿಗೆ ಈಗಾಗಲೇ ಪ್ರತ್ಯಾಯೋಜಿಸಿದ್ದು, ಅದರಂತೆ ಕ್ರಮ ಕೈಗೊಳ್ಳಿ, ಇಲ್ಲವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು" ಎಂದು ಎಚ್ಚರಿಸಿದರು.
"ಕೊರೊನಾ ಎರಡನೇ ಅಲೆಯ ನಿಯಂತ್ರಣಕ್ಕೆ ಕೋವಿಡ್ ಸುರಕ್ಷಾ ನಿಯಮಗಳ ಕಟ್ಟುನಿಟ್ಟಿನ ಪಾಲನೆ ಅತ್ಯಗತ್ಯವಾಗಿದ್ದು, ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ದಂಡ ವಿಧಿಸುವ ಪ್ರಕರಣಗಳನ್ನು ದಾಖಲಿಸಲು ಈಗಾಗಲೇ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದ್ದು, ಸಾರ್ವಜನಿಕರು ಎಲ್ಲಾ ಸುರಕ್ಷಾ ನಿಯಮಗಳನ್ನು ತಪ್ಪದೇ ಪಾಲಿಸುವುದರ ಮೂಲಕ ಜಿಲ್ಲೆಯನ್ನು ಕೊರೊನಾದ 2ನೇ ಅಲೆಯಿಂದ ರಕ್ಷಿಸಲು ಸಹಕರಿಸಬೇಕು" ಎಂದು ಮನವಿ ಮಾಡಿದ್ದಾರೆ.
ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ನಗರಾಭಿವೃಧ್ದಿ ಕೋಶದ ಯೋಜನಾ ನಿರ್ದೇಶಕ ಅರುಣಪ್ರಭು ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.
ಉಡುಪಿ ಡಿಸಿ ಜಿ ಜಗದೀಶ್ ಅವರು ಮಾಸ್ಕ್ ಧರಿಸದವರ ಮೇಲೆ ಮಾರ್ಚ್ 23ರ ಮಂಗಳವಾರದಂದು ದಾಳಿ ನಡೆಸಿದ್ದಾರೆ.
ಉಡುಪಿ ಸರ್ವಿಸ್ ಬಸ್ ನಿಲ್ದಾಣದಲ್ಲಿ ದಿಡೀರ್ ಕಾರ್ಯಾಚರಣೆ ನಡೆಸಿದ ಡಿಸಿ, ಮಾಸ್ಕ್ ಧರಿಸದವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.