ಉಪ್ಪಿನಂಗಡಿ, ಮಾ 30 (DaijiworldNews/MS): ಪತ್ರಿಕೆ ಸಾಗಾಟ ಮಾಡುತ್ತಿದ್ದ ಓಮ್ನಿ ಕಾರೊಂದು ಅಪರಿಚಿತ ವ್ಯಕ್ತಿಗೆ ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪ 34 ನೆಕ್ಕಿಲಾಡಿಯಲ್ಲಿ ಮಂಗಳವಾರ ಮುಂಜಾನೆ 5:20ರ ಸುಮಾರಿಗೆ ನಡೆದಿದೆ.

ಬಿ.ಸಿ.ರೋಡ್ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಪತ್ರಿಕೆ ಸಾಗಾಟ ಮಾಡುತ್ತಿದ್ದ ಓಮ್ನಿ ಕಾರು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೋರ್ವರಿಗೆ ಢಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡು ರಸ್ತೆ ಬದಿ ಬಿದ್ದಿದ್ದ ಅವರನ್ನು ಉಪ್ಪಿನಂಗಡಿ ಪೊಲೀಸ್ ಸಿಬ್ಬಂದಿ ಪ್ರತಾಪ್ ಹಾಗೂ ಹೈವೆ ಪಟ್ರೋಲ್ ನ ಪೊಲೀಸರು ತಕ್ಷಣ ಚಿಕಿತ್ಸೆಗಾಗಿ ಪುತ್ತೂರಿಗೆ ಕಳುಹಿಸಿದ್ದಾರೆ.
ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಅಪಘಾತವೆಸಗಿದ ಓಮ್ನಿ ಕಾರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿರುವುದಾಗಿ ತಿಳಿಸಿದ್ದಾರೆ.