ಮಂಗಳೂರು, ಎ.24 (DaijiworldNews/PY): ಎಸ್ಇಝಡ್ನಲ್ಲಿರುವ ಕ್ಯಾಟಸಿಂತ್ ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯಲ್ಲಿ ಎಪ್ರಿಲ್ 24ರ ಶನಿವಾರದಂದು ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ.
![](http://www.daijiworld.in/images3/asha_24421_fire1.jpg)
![](http://www.daijiworld.in/images3/asha_24421_fire2.jpg)
![](http://www.daijiworld.in/images3/asha_24421_fire3.jpg)
![](http://www.daijiworld.in/images3/asha_24421_fire4.jpg)
![](https://daijiworld.ap-south-1.linodeobjects.com/iWeb/tvdaijiworld/img_tv247/PY-240421-bajpe4.jpg)
![](https://daijiworld.ap-south-1.linodeobjects.com/iWeb/tvdaijiworld/img_tv247/PY-240421-bajpe5.jpg)
![](https://daijiworld.ap-south-1.linodeobjects.com/iWeb/tvdaijiworld/img_tv247/PY-240421-bajpe6.jpg)
ಕ್ಯಾಟಸಿಂತ್ ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯಲ್ಲಿ ಸ್ಪೋಟ ಸಂಭವಿಸಿ ಅಗ್ನಿ ಅವಘಡ ಸಂಭವಿಸಿದ್ದು, ಸುತ್ತಮುತ್ತ ಹೊಗೆ ಆವರಿಸಿ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.
ಇಲ್ಲಿ ಪೆಟ್ರೋಲಿಯಂ ಉತ್ಪನ್ನಗಳನ್ನು ಸಂಸ್ಕರಿಸಲಾಗುತ್ತದೆ. ಸಿಲಿಂಡರ್ ಸ್ಪೋಟದಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ.
ಕಂಪೆನಿಯ ಸಿಬ್ಬಂದಿಗಳ ಊಟದ ಸಮಯದಲ್ಲಿ ಸ್ಪೋಟ ಸಂಭವಿಸಿದ್ದು, ಈ ಹಿನ್ನೆಲೆ ಸಿಬ್ಬಂದಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಫೋಟದಲ್ಲಿ ಯಾವುದೇ ಅವಘಡ ಸಂಭವಿಸಿಲ್ಲ.
ಸ್ಥಳದಲ್ಲಿ ಮಂಗಳೂರು ಕದ್ರಿ ಅಗ್ನಿಶಾಮಕ ದಳ, ಎಚ್ಪಿಸಿಎಲ್, ಎನ್ಎಂಪಿಟಿ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಬಜಪೆ ಪೊಲೀಸರು ಭೇಟಿ ನೀಡಿದ್ದಾರೆ.