ಮೂಡುಬಿದ್ರೆ, ಏ.25 (DaijiworldNews/HR): ಶೀರ್ತಾಡಿ ಗ್ರಾಮ ಪಂಚಾಯತ್ನ ಪಡುಕೋನಾಜೆ ಎಂಬಲ್ಲಿ ಪೆಟ್ರೋಲ್ ಟ್ಯಾಂಕರ್ ಮತ್ತು ಟಾಟಾ ಜಿಪ್ ನಡುವೆ ಡಿಕ್ಕಿ ಸಂಭವಿಸಿದ್ದು, ಉಜಿರೆಯ ಯುವಕನೊಬ್ಬನಿಗೆ ಅಪಘಾತದಲ್ಲಿ ತೀವ್ರ ಗಾಯಗಳಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
![](https://daijiworld.ap-south-1.linodeobjects.com/iWeb/tvdaijiworld/img_tv247/hr-250421-accident.jpg)
ಸಾಂಧರ್ಭಿಕ ಚಿತ್ರ
ಮೃತಪಟ್ಟ ಯುವಕನನ್ನು ಉಜಿರೆಯ ನೆಕಾರಪೇಟೆ ನಿವಾಸಿಯಾದ ತಾಲ್ಲೂಕು ಪಂಚಾಯತ್ ಮಾಜಿ ಸದಸ್ಯೆ ಶೋಭಾ ಶೆಟ್ಟಿಯವರ ಪುತ್ರ ಭವಿಶ್ ಶೆಟ್ಟಿ (26) ಎಂದು ಗುರುತಿಸಲಾಗಿದೆ.
ಭವೀಶ್ ಟಾಟಾ ಜಿಪ್ ವಾಹನದಲ್ಲಿ ಅಮೆಜಾನ್ನಿಂದ ಪಾರ್ಸೆಲ್ ಅನ್ನು ಮೂಡುಬಿದ್ರೆಗೆ ತಲುಪಿಸಿ ಹಿಂದಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಅಪಘಾತದಲ್ಲಿ ಭವಿಶ್ ತಲೆಗೆ ತೀವ್ರ ಗಾಯಗಳಾಗಿದ್ದು, ಅವರನ್ನು ಮಂಗಳೂರಿಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಈ ಬಗ್ಗೆ ಮೂಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.