ಉಡುಪಿ, ಮೇ.01 (DaijiworldNews/PY): ಮೊಬೈಲ್ನಲ್ಲಿ ಮಾತನಾಡುತ್ತಾ ಕಾರು ಚಲಾಯಿಸುತ್ತಿದ್ದ ಮಹಿಳೆಗೆ ದಂಡ ಕಟ್ಟಲು ಸೂಚಿಸಿದ ಟ್ರಾಫಿಕ್ ಎಸ್ಐಗೆ ಮಹಿಳೆ ಅವಾಜ್ ಹಾಕಿರುವ ಘಟನೆ ಉಡುಪಿಯ ಕ್ಲಾಕ್ ಟವರ್ ಬಳಿ ನಡೆದಿದೆ.



ಮೊಬೈಲ್ನಲ್ಲಿ ಮಾತನಾಡುತ್ತಾ ಕಾರು ಚಲಾಯಿಸುತ್ತಿದ್ದ ಮಹಿಳೆಯನ್ನು ತಡೆದ ಟ್ರಾಫಿಕ್ ಎಸ್ಐ ಅಬ್ದುಲ್ ಖಾದರ್ ಅವರು, ಕಾರನ್ನು ಬದಿಗೆ ನಿಲ್ಲಿಸಿ ಮಾತನಾಡಲು ಸೂಚಿಸಿದ್ದಾರೆ. ಅಲ್ಲದೇ ಮಾಡಿದ ತಪ್ಪಿಗೆ ದಂಡ ಕಟ್ಟಲು ಹೇಳಿದ್ದು, ಈ ವೇಳೆ ಮಹಿಳೆ, "ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದೀರಿ" ಎಂದು ಹೇಳಿದ್ದಾಳೆ.
"ಜಿಲ್ಲೆಯಲ್ಲಿ ಕೊರೊನಾ ಎಮರ್ಜೆನ್ಸ್ ಲಾಕ್ಡೌನ್ ಸಂದರ್ಭ ಅನಗತ್ಯವಾಗಿ ತಿರುಗಾಡುತ್ತಾ, ರಸ್ತೆ ನಿಯಮವನ್ನು ಉಲ್ಲಂಘಿಸಿದರೆ ಸುಮ್ಮನಿರುವುದಿಲ್ಲ" ಎಂದು ಟ್ರಾಫಿಕ್ ಎಸ್ಐ ಮಹಿಳೆಗೆ ದಂಡ ವಿಧಿಸಿ, ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.