ಕಾಸರಗೋಡು, ಮೇ.14 (DaijiworldNews/HR): ಅರಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರತ ಕುಸಿತ ಮುಂದಿನ ಕೆಲ ಗಂಟೆಗಳಲ್ಲಿ ಚಂಡ ಮಾರುತವಾಗಿ ಪರಿವರ್ತನೆ ಗೊಳ್ಳಲಿದ್ದು, ಭಾರೀ ಗಾಳಿ, ಮಳೆಗೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿರುವ ಹಿನ್ನಲೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ತಿಳಿಸಿದ್ದಾರೆ.

ಮುನ್ನೆಚ್ಚರಿಕಾ ಕ್ರಮದ ಅಂಗವಾಗಿ 30 ಸದಸ್ಯರನ್ನು ಒಳಗೊಂಡ ರಾಷ್ಟ್ರೀಯ ದುರಂತ ನಿವಾರಣಾ ಪಡೆಯನ್ನು ನೇಮಿಸಲಾಗಿದೆ ಎಂದು ತಿಳಿಸಿದ್ದಾರೆ.
ಕಡಲ್ಕೋರೆತ ಉಲ್ಬಣಗೊಳ್ಳುತ್ತಿರುವ ಹಿನ್ನಲೆಯಲ್ಲಿ ಮುಸೋಡಿ, ಚೇರಂಗೈ ಹಾಗೂ ಮೊದಲಾದ ಕಡೆಗಳಲ್ಲಿ ಎಲ್ಲಾ ರೀತಿಯ ಮುನ್ನೆಚ್ಚರಿಕೆಗಳನ್ನು ವಹಿಸಲಾಗಿದೆ. ಕಂದಾಯ, ಮೀನುಗಾರಿಕೆ, ಕರಾವಳಿ ಪೊಲೀಸರಿಗೆ ಈ ಬಗ್ಗೆ ಅಗತ್ಯ ನಿರ್ದೇಶನಗಳನ್ನು ನೀಡಲಾಗಿದೆ.
ನಾಲ್ಕು ತಾಲೂಕುಗಳಲ್ಲಿ ಕಂಟ್ರೋಲ್ ರೂಂಗಳನ್ನು ತೆರೆಯಲಾಗಿದ್ದು, ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗಿರುವಂತೆ ಪೊಲೀಸ್ ಮತ್ತು ಅಗ್ನಿಶಾಮಕ ದಳಕ್ಕೆ ಆದೇಶ ನೀಡಲಾಗಿದೆ.
ತಾಲೂಕು ಮಟ್ಟಗಳ ಲ್ಲಿ ನಿಯಂತ್ರಣ ಕೊಠಡಿಗಳ ದೂರವಾಣಿ ಸಂಖ್ಯೆಗಳು:
ಮಂಜೇಶ್ವರ - 04998-244022
ಕಾಸರಗೋಡು - 04994-230021
ಹೊಸದುರ್ಗ - 0467-2204042
ವೆಳ್ಳರಿಕುಂಡು - 0467-2242320.
ಕಾಸರಗೋಡು ಜಿಲ್ಲಾ ಮಟ್ಟದ ತುರ್ತು ಕ್ರಮ ಕೇಂದ್ರದ ದೂರವಾಣಿ ಸಂಖ್ಯೆ: 04994-257700