ಕಾಸರಗೋಡು, ಡಿ.21 (DaijiworldNews/HR): ಪೆರಿಯದಲ್ಲಿರುವ ಕೇಂದ್ರ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕಾಸರಗೋಡಿಗೆ ಆಗಮಿಸಿದ ರಾಷ್ಟ್ರಪತಿ ಆಗಮಿಸಿದ್ದಾರೆ.
ರಾಮನಾಥ್ ಕೋವಿಂದ್ ಅವರನ್ನು ಪೆರಿಯದ ಹೆಲಿಪ್ಯಾಡ್ನಲ್ಲಿ ಕೇರಳ ರಾಜ್ಯ ಪಾಲ ಆರಿಫ್ ಮುಹಮ್ಮದ್ ಖಾನ್, ಕೇರಳ ಸಚಿವ ಎಂ.ವಿ ಗೋವಿಂದನ್ ಮಾಸ್ಟರ್, ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ಬಿ ರಾಜೀವ್ ಮೊದಲಾದವರು ಬರಮಾಡಿಕೊಂಡಿದ್ದಾರೆ.
ಇನ್ನು ರಾಷ್ಟ್ರಪತಿ ಆಗಮನ ಹಿನ್ನೆಲೆಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30ರ ತನಕ ಕಾಸರಗೋಡು ಜಿಲ್ಲೆಯಲ್ಲಿ ಸಂಚಾರ ನಿಯಂತ್ರಣ ಜಾರಿಗೆ ತರಲಾಗಿದೆ. ರಾಷ್ಟ್ರೀಯ ಹೆದ್ದಾರಿಯ ಮಿಂಗೋತ್ ನಿಂದ ಚಟ್ಟಂಚಾಲ್ ತನಕ ರಾಜ್ಯ ಹೆದ್ದಾರಿಯ ಪಳ್ಳಿಕೆರೆಯಿಂದ ಕಳ್ನಾಡ್ ತನಕ ಸಂಚಾರ ನಿಯಂತ್ರಣ ಮಾಡಲಾಗಿದೆ.
ಬಸ್ಸು ಹಾಗೂ ಇತರ ಲಘು ವಾಹನಗಳನ್ನು ನಿಯಂತ್ರಣದೊಂದಿಗೆ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು. ಸರಕು ಸೇರಿದಂತೆ ಘನ ವಾಹನಗಳು ಬೆಳಿಗ್ಗೆ 10ರಿಂದ ಸಂಜೆ 5.30ರ ತನಕ ನಿರ್ಬಂಧಿಸಲಾಗಿದೆ.