ಮಂಗಳೂರು, ಜೂ 04 (DaijiworldNews/MS): ಜಿಲ್ಲೆಯ ಎಲ್ಲಾ ಬಸ್ಸುಗಳ ನಾಮಫಲಕ ಹಾಗೂ ಬಸ್ಸಿನ ಮಾರ್ಗ ಸೂಚಿಗಳನ್ನು ಕನ್ನಡದಲ್ಲೇ ನಮೂದಿಸುವಂತೆ ಕಳೆದ ಏಪ್ರಿಲ್ ಮಾಹೆಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಅದರಂತೆ ಕಡ್ಡಾಯವಾಗಿ ಜಿಲ್ಲೆಯ ಎಲ್ಲಾ ಬಸ್ಸುಗಳ ನಾಮಫಲಕ ಮತ್ತು ಮಾರ್ಗಸೂಚಿಗಳನ್ನು ಕನ್ನಡದಲ್ಲಿಯೇ ಬರೆಯುವಂತೆ ದಕ್ಷಿಣ ಕನ್ನಡ ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.