ಮಂಗಳೂರು, ಜು 16(DaijiworldNews/ AK): ನಾನು ಸಿದ್ದರಾಮಯ್ಯ ಅವರ ಜೊತೆ ಮಂತ್ರಿಯಾಗಿ, ಶಾಸಕನಾಗಿ ಕೆಲಸ ಮಾಡಿದ್ದೇನೆ. ಹಳೆಯ ಸಿದ್ದರಾಮಯ್ಯನವರು ಇವತ್ತು ಇಲ್ಲ ಎಂದು ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ, ಮುಡಾ ಹಗರಣದ ಕುರಿತು ಸುದ್ದಿಗಾರರ ಪ್ರಶ್ನೆಗೆ ಬುಧವಾರ ಉತ್ತರಿಸಿದ ಅವರು, 'ನಾನು ಸಿದ್ದರಾಮಯ್ಯ ಅವರ ಜೊತೆ ಮಂತ್ರಿಯಾಗಿ, ಶಾಸಕನಾಗಿ ಕೆಲಸ ಮಾಡಿದ್ದೇನೆ. ಇವತ್ತು ಇರುವ ಸಿದ್ದರಾಮಯ್ಯನವರ ವರ್ತನೆ ನೋ ಡಿ ನನಗೂ ಒಂ ದು ರೀ ತಿ ಅನುಮಾನ ಮೂಡಿದೆ ಎಂದರು.
ವಾಸ್ತವವನ್ನು ಯಾರೂ ಮುಚ್ಚಿಡಲು ಆಗಲ್ಲ. ಬೆಕ್ಕು ಕಣ್ಮುಚ್ಚಿಕೊಂಡು ಹಾಲು ಕುಡಿದರೆ ಯಾರಿಗೂ ಗೊತ್ತಾಗಲ್ಲ ಎಂದು ಯಾರೂ ತಿಳಿದುಕೊಳ್ಳಬಾರದು. ಸಿದ್ದರಾಮಯ್ಯನವರು ತಪ್ಪನ್ನು ತಿದ್ದಿಕೊಂಡು ಜನರಿಗೆ ವಾಸ್ತವಾಂಶ ಏನೆಂದು ತಿಳಿಸಬೇಕು. ಆಗ ಅವರು ಹಳೆ ಸಿದ್ದರಾಮಯ್ಯ ಆಗುತ್ತಾರೆ ಎಂದು ಹೇಳಿದರು.