ತುಮಕೂರು, ಡಿ.12(DaijiworldNews/AA): ಕೃಷಿ ಹೊಂಡದಲ್ಲಿ ಕೆಮಿಕಲ್ ಹಾಕಿ ಬ್ಲಾಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್ನನ್ನು ಬಂಧಿಸಲಾಗಿದೆ.

ಸೋಡಿಯಂ ನೀರಿನಲ್ಲಿ ಎಸೆದು ಪ್ರತಾಪ್ ಬ್ಲಾಸ್ಟ್ ಮಾಡಿದ್ದರು. ಈ ಹಿನ್ನೆಲೆ ಪ್ರತಾಪ್ ಸಾರ್ವಜನಿಕರು ಹಾಗೂ ಪರಿಸರ ಪ್ರೇಮಿಗಳಿಂದ ಟೀಕೆಗೆ ಒಳಗಾಗಿದ್ದರು. ಈ ಸಂಬಂಧ ಡಿ.12ರಂದು ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಿಗೇಶಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ಡ್ರೋನ್ ಪ್ರತಾಪ್ನನ್ನು ಅರೆಸ್ಟ್ ಮಾಡಿ ಬೆಂಗಳೂರಿಗೆ ಕರೆತರುತ್ತಿದ್ದಾರೆ ಎಂದು ತಿಳಿದುಬಂದಿದೆ.
ಪ್ರತಾಪ್ ಅವರು ನಿರ್ಜನ ಪ್ರದೇಶದಲ್ಲಿದ್ದ ಕೃಷಿ ಹೊಂಡದಂತ ಆಳವಾದ ಗುಂಡಿಯಲ್ಲಿನ ನೀರಿಗೆ ಕೆಮಿಕಲ್ ಹಾಕಿ ನೀರಿನಾಳದಲ್ಲಿ ಬ್ಲಾಸ್ಟ್ ಮಾಡಿದ್ದರು. ಪ್ರತಾಪ್ ಕೆಮಿಕಲ್ ಎಸೆದಿದ್ದೇ ತಡ ದೊಡ್ಡ ಮಟ್ಟದಲ್ಲಿ ಬ್ಲಾಸ್ಟ್ ಆಗಿದೆ, ಬೆಂಕಿ ಸಹ ಚಿಮ್ಮಿದೆ. ಅಷ್ಟೇ ಅಲ್ಲದೇ ಬಾಂಬ್ ಬ್ಲಾಸ್ಟ್ ರೀತಿ ದೃಶ್ಯ ಕಂಡುಬಂದಿದೆ. ಈ ವಿಡಿಯೋಗೆ ಸಾರ್ವಜನಿಕರ ಟೀಕೆ ವ್ಯಕ್ತಪಡಿಸಿದ್ದರು.