ಗದಗ,ಡಿ.15(DaijiworldNews/TA) : ಬಿಜೆಪಿಗರು ಭಾವನೆಗಳ ಜೊತೆ ರಾಜಕಾರಣ ಮಾಡಿದರೆ. ನಾವು ನಮ್ಮ ನಮ್ಮ ಗ್ಯಾರಂಟಿ ಮೂಲಕ ಬಡವರ ಬದುಕಿನಲ್ಲಿ ಬದಲಾವಣೆ ತಂದಿದ್ದೇವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ರೋಣ ಪಟ್ಟಣದ ದ್ರೋಣಾಚಾರ್ಯ ಕ್ರೀಡಾಂಗಣದಲ್ಲಿ ವಿವಿಧ ಯೋಜನೆಗಳ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಈ ವೇಳೆ, ಗ್ಯಾರಂಟಿ ಜಾರಿ ಮಾಡುವ ಮೂಲಕ ಕೊಟ್ಟ ಮಾತನ್ನು ನಾವು ಉಳಿಸಿಕೊಂಡಿದ್ದೇವೆ. ಅಭಿವೃದ್ಧಿಯೇ ನಮ್ಮ ತಂದೆ-ತಾಯಿ, ಗ್ಯಾರಂಟಿಗಳೇ ನಮ್ಮ ಬಂಧು ಬಳಗ ಎಂದು ಹೇಳಿದ್ದಾರೆ.
ಗೃಹಲಕ್ಷ್ಮೀ ಯೋಜನೆಯಲ್ಲಿ ಸಬಲೀಕರಣ, ಅನ್ನಭಾಗ್ಯದಲ್ಲಿ ದಾಸೋಹ, ಗೃಹಜ್ಯೋತಿ ಮೂಲಕ ಸಮಾಜಕ್ಕೆ ಬೆಳಕು, ಶಕ್ತಿ ಯೋಜನೆ ಮೂಲಕ ಮಹಿಳೆಗೆ ಸ್ವಾತಂತ್ರ್ಯ, ಯುವನಿಧಿ ಮೂಲಕ ಕಾಯಕವನ್ನು ನೀಡಲಾಗಿದೆ ಎಂದು ಹೇಳಿಕೆ ನೀಡಿದ್ದಾರೆ.