ಯಾದಗಿರಿ, ಮಾ.05(DaijiworldNews/TA): ಡಿ.ಕೆ ಶಿವಕುಮಾರ್ಗೆ ಮುಖ್ಯಮಂತ್ರಿ ಆಗುವ ಯೋಗವಿದೆ ಎಂದು ನೊಣವಿನಕೆರೆ ಅಜ್ಜಯ್ಯ ಸ್ವಾಮೀಜಿಯವರು ಭವಿಷ್ಯ ನುಡಿದಿದ್ದಾರೆ.

ಅಬ್ಬೆತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ವೇಳೆ, ಶ್ರೀಮಠದ ಆಶೀರ್ವಾದದಿಂದ ಡಿಕೆಶಿ ಸಿಎಂ ಆಗ್ತಾರೆ. ಇದು ರೈತರ, ವರ್ತಕರ ಹಾಗೂ ಮಠದ ಭಕ್ತರ ಆಸೆ. ಎಲ್ಲಾ ಜನರ ಸಂಕಲ್ಪದಿಂದ ಒಂದು ದಿನ ಸಿಎಂ ಆಗೇ ಆಗ್ತಾರೆ. ಯಾವ ದಿನ ಮುಖ್ಯಮಂತ್ರಿ ಆಗುತ್ತಾರೆ ಎಂಬುವುದನ್ನು ಹೇಳೋಕೆ ಆಗಲ್ಲ ಎಂದು ಹೇಳಿದ್ದಾರೆ.
ಅಬ್ಬೆತುಮಕೂರು ವಿಶ್ವಾರಾಧ್ಯರ ಗದ್ದುಗೆಗೂ ಬಂದಿದ್ದೇನೆ. ಅವರ ಆಶೀರ್ವಾದವೂ ಡಿಕೆಶಿಗೆ ಸಿಗಲಿ. ಆ ಪರಮಾತ್ಮನ ಆಶೀರ್ವಾದವೂ ಡಿಕೆಶಿಗೆ ಸಿಗಲಿ ಎಂದು ಸ್ವಾಮೀಜಿ ಪ್ರಾರ್ಥನೆ ಮಾಡಿದ್ದಾರೆ. ರಾಜ ಪ್ರತ್ಯಕ್ಷ್ಯ ದೇವರಾಗಲಿ ಎಂದು ಹಾರೈಸಿದ್ದಾರೆ.