ಯಾದಗಿರಿ, ಮಾ.23 (DaijiworldNews/AA): ಹನಿಟ್ರ್ಯಾಪ್ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಬೇಕು. ಹನಿಟ್ರ್ಯಾಪ್ನ ಡೈರೆಕ್ಟರ್ ಮತ್ತು ಪ್ರೊಡ್ಯುಸರ್ ಯಾರು ಅಂತ ಗೊತ್ತಾಗಬೇಕಾದರೆ ಸಿಬಿಐ ತನಿಖೆಯಾಗಬೇಕು. ಹನಿಟ್ರ್ಯಾಪ್ ಪ್ರಕರಣದಿಂದ ಇಡೀ ರಾಜ್ಯದ ಜನ ಅಸಹ್ಯಪಡುವ ಪರಿಸ್ಥಿತಿ ಬಂದಿದೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.

ಜಿಲ್ಲೆಯ ಮಹಲ್ ರೋಜಾದಲ್ಲಿ ಹನಿಟ್ರ್ಯಾಪ್ ವಿಚಾರವಾಗಿ ಮಾತನಾಡಿದ ಅವರು, ರಾಜ್ಯದಲ್ಲಿ ಒಂದು ಫ್ಯಾಷನ್, ಒಂದು ಟ್ರೆಂಡ್ ಸ್ಟಾರ್ಟ್ ಆಗಿದೆ. ಯಾವುದೇ ಪಕ್ಷದವರಿದ್ದರೂ ಈ ರೀತಿ ಹನಿಟ್ರ್ಯಾಪ್ನಿಂದ ಮುಜುಗರ ಆಗುತ್ತದೆ. ರಾಜಕೀಯದಲ್ಲಿ ಹಲವು ವರ್ಷಗಳಿಂದ ಜನರ ಪ್ರೀತಿಗಳಿಸಿ, ದೊಡ್ಡ ಮಟ್ಟಕ್ಕೆ ಮುಟ್ಟಿದ್ದೀವಿ. ಆದರೆ ಈ ರೀತಿಯ ಸಂದರ್ಭದಲ್ಲಿ ಹನಿಟ್ರ್ಯಾಪ್ನಿಂದ ಮನಸ್ಸಿಗೆ ನೋವು ಮಾಡುವ ಕೆಲಸ ಕೆಲವು ವ್ಯಕ್ತಿಗಳು ಮಾಡುತ್ತಿದ್ದಾರೆ ಎಂದು ಹೇಳಿದರು.
ಯಾವುದೇ ಪಕ್ಷದವರು ಇರಲಿ ಸಿಬಿಐ ತನಿಖೆ ಮಾಡಬೇಕು. ಜನಪ್ರತಿನಿಧಿಗಳಿಗೆ ರಕ್ಷಣೆ ಕೊಡಬೇಕು, ಅವರ ಮೇಲಿನ ವಿಶ್ವಾಸ ಉಳಿಸಬೇಕು. ಅದಕ್ಕಾಗಿ ಈ ಹನಿಟ್ರ್ಯಾಪ್ಗೆ ಕಡಿವಾಣ ಹಾಕಬೇಕು. ಸಿಬಿಐ ತನಿಖೆಯಾದರೆ ಇದರ ಹಿಂದೆ ಯಾರಿದ್ದಾರೆಂದು ಹೊರಗಡೆ ಬರುತ್ತದೆ. ಇದಕ್ಕಿಂತ ಮುಂಚೆ ಅನೇಕರಿಗೆ ಹನಿಟ್ರ್ಯಾಪ್ ಆಗಿದೆ. ಹಿಂದುಳಿದ ಜಾತಿಯ ವ್ಯಕ್ತಿಗಳಾದ ಅರವಿಂದ ಲಿಂಬಾವಳಿ, ರಮೇಶ್ ಜಾರಕಿಹೊಳಿ, ಇದೀಗ ಸಚಿವ ರಾಜಣ್ಣ ಅವರ ಮೇಲೆ ಹನಿಟ್ರ್ಯಾಪ್ ಯತ್ನ ನಡೆದಿದೆ. ಪಕ್ಷಾತೀತಿವಾಗಿ ರಾಜಕಾರಣಿಗಳಿಗೆ ಈ ರೀತಿ ಆದರೆ ನೋವು ಉಂಟಾಗುತ್ತದೆ. ಇದಕ್ಕೆ ಯಾರು ಡೈರೆಕ್ಟರ್, ಯಾರು ಪ್ರೊಡ್ಯುಷರ್ ಈ ಹನಿಟ್ರ್ಯಾಪ್ ಫ್ಯಾಕ್ಟರಿಯನ್ನು ಯಾರು ಇಟ್ಟುಕೊಂಡಿದ್ದಾರೆ ಎನ್ನೋದು ಹೊರಬರಬೇಕಾದರೆ ಸಿಬಿಐ ತನಿಖೆ ಆಗಬೇಕು ಎಂದರು.