ನವದೆಹಲಿ, ಜೂ. 23 (DaijiworldNews/ AK): ಗುಜರಾತ್, ಪಂಜಾಬ್, ಕೇರಳ ಮತ್ತು ಪಶ್ಚಿಮ ಬಂಗಾಳ ಈ ನಾಲ್ಕು ರಾಜ್ಯಗಳಲ್ಲಿ 5 ಸ್ಥಾನಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶಗಳು ಇಂದು ಪ್ರಕಟವಾಗಿದೆ.

ಮತ ಎಣಿಕೆ ಬೆಳಿಗ್ಗೆ 8 ಗಂಟೆಗೆ ಬಿಗಿ ಭದ್ರತೆಯ ನಡುವೆ ಪ್ರಾರಂಭವಾಯಿತು. ಭಾರತೀಯ ಜನತಾ ಪಕ್ಷ (ಬಿಜೆಪಿ), ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಕಾಂಗ್ರೆಸ್ ನೇತೃತ್ವದ ಯುಡಿಎಫ್ ತಲಾ ಒಂದು ಸ್ಥಾನವನ್ನು ಗೆದ್ದರೆ, ಆಮ್ ಆದ್ಮಿ ಪಕ್ಷ (ಎಎಪಿ) ಗುಜರಾತ್ ಮತ್ತು ಪಂಜಾಬ್ನಲ್ಲಿ ಎರಡು ಸ್ಥಾನಗಳನ್ನು ಗೆದ್ದಿತು.
ಜೂನ್ 19ರಂದು ಕೇರಳದ ನೀಲಂಬೂರ್, ಗುಜರಾತ್ನ ವಿಸಾವದರ್ ಮತ್ತು ಕಾಡಿ, ಪಂಜಾಬ್ನ ಲುಧಿಯಾನ ಪಶ್ಚಿಮ ಮತ್ತು ಪಶ್ಚಿಮ ಬಂಗಾಳದ ಕಾಳಿಗಂಜ್ನಲ್ಲಿ ಉಪಚುನಾವಣೆಗಳು ನಡೆದವು. ಈ ಕ್ಷೇತ್ರಗಳಲ್ಲಿ ಬಿಜೆಪಿ, ಕಾಂಗ್ರೆಸ್, ಆಮ್ ಆದ್ಮಿ ಪಕ್ಷ ಮತ್ತು ಪಿಣರಾಯಿ ವಿಜಯನ್ ಅವರ ಎಡ ಪ್ರಜಾಸತ್ತಾತ್ಮಕ ರಂಗ (ಎಲ್ಡಿಎಫ್) ನಡುವೆ ತೀವ್ರ ಪೈಪೋಟಿ ನಡೆಯಿತು.
ಜೂನ್ 19ರಂದು 4 ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶವನ್ನು ಭಾರತೀಯ ಚುನಾವಣಾ ಆಯೋಗ ಇಂದು ಪ್ರಕಟಿಸಿದೆ.
ಗುಜರಾತ್, ಪಶ್ಚಿಮ ಬಂಗಾಳ ಮತ್ತು ಪಂಜಾಬ್ನಲ್ಲಿ ಹಾಲಿ ಶಾಸಕರ ನಿಧನದ ಪರಿಣಾಮವಾಗಿ ಉಪಚುನಾವಣೆ ನಡೆಯಿತು. ಆದರೆ ನೀಲಂಬೂರ್ ಮತ್ತು ಗುಜರಾತ್ನಲ್ಲಿ ಶಾಸಕರ ರಾಜೀನಾಮೆಯಿಂದಾಗಿ ಒಂದು ಸ್ಥಾನಗಳಿಗೆ ಚುನಾವಣೆಗಳು ನಡೆದವು.