ಚಿಕ್ಕಬಳ್ಳಾಪುರ, ಜು. 02 (DaijiworldNews/AA): "5 ವರ್ಷವೂ ನಾನೇ ಸಿಎಂ ಆಗಿರ್ತೀನಿ. ನಮ್ಮ ಸರ್ಕಾರ ಬಂಡೆ ತರ ಇರುತ್ತೆ" ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ವಿಚಾರವಾಗಿ ಚಿಕ್ಕಬಳ್ಳಾಪುರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "5 ವರ್ಷ ನಾನೇ ಸಿಎಂ ಆಗಿರ್ತೀನಿ. ನಿಮಗ್ಯಾಕೆ ಅನುಮಾನ ಬಂದಿದೆ? ಬಿಜೆಪಿಯವರು ಸುಳ್ಳು ಹೇಳೋದ್ರಲ್ಲಿ ನಿಸ್ಸೀಮರು, ಸತ್ಯ ಹೇಳೋದು ಅವರಿಗೆ ಗೊತ್ತೇ ಇಲ್ಲ. ನಾವೆಲ್ಲರೂ ಒಟ್ಟಾಗಿದ್ದೇವೆ. 5 ವರ್ಷ ನಾವೇ ಅಧಿಕಾರದಲ್ಲಿ ಇರ್ತೇವೆ. ನಮ್ಮ ಸರ್ಕಾರ ಬಂಡೆ ತರ ಇರುತ್ತೆ" ಎಂದು ಹೇಳಿದರು.
"ಬಿಜೆಪಿಯವರು ಹಗಲು ಕನಸು ಕಾಣ್ತಿದ್ದಾರೆ. ಅಧಿಕಾರದಲ್ಲಿದ್ದಾಗ ಏನೂ ಮಾಡಲಿಲ್ಲ. ಡಿಕೆ ಶಿವಕುಮಾರ್ ಹೇಳೋ ಹಾಗೆ ಏನೂ ಸಾಕ್ಷಿ ಗುಡ್ಡೆ ಬಿಟ್ಟು ಹೋಗಿದ್ದಾರೆ. ಕುಮಾರಸ್ವಾಮಿ ಜೊತೆ ಸಮ್ಮಿಶ್ರ ಸರ್ಕಾರದಲ್ಲಿ ಏನು ಮಾಡಿದ್ರು? ಸುಳ್ಳು ಹೇಳಿಕೊಂಡು ಜನರನ್ನ ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡಿದ್ದಾರೆ ಬಿಟ್ರೆ, ಬೇರೆನೂ ಮಾಡಿಲ್ಲ" ಎಂದರು.
"2ನೇ ವರ್ಷದ ಸಾಧನಾ ಸಮಾವೇಶದಲ್ಲಿ 3 ಲಕ್ಷ ಜನ ಇದ್ರು. ಮಳೆ ಇದ್ದರೂ ಸಹ ಜನ ಬಂದಿದ್ದರು. ಯಾರಾದ್ರೂ ಸುಮ್ಮನೆ ಬರ್ತಾರಾ? ಎಂದು ಪ್ರಶ್ನಿಸಿದರು.