ಶ್ರೀನಗರ್, 16 (DaijiworldNews/AK): ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು ಗುರುವಾರ ಭಾರೀ ಮೇಘಸ್ಫೋಟ ಘಟನೆ ಸಂಭವಿಸಿದ್ದು ಭಾರೀ ಸಾವು ನೋವುಗಳಾಗಿವೆ. ಕಿಶ್ತಾವಾರ್ ಜಿಲ್ಲೆಯ ಪದ್ದರ್ ಚಶೋತಿ ಎಂಬಲ್ಲಿ ಭಾರೀ ಮಳೆಯಿಂದ ಪ್ರವಾಹ ಸಂಭವಿಸಿದೆ.

ಈ ಪ್ರಕೃತಿ ವಿಕೋಪ ದುರ್ಘಟನೆಯಲ್ಲಿ 40ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಶಂಕೆ ಇದೆ. 100ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ, 200ಕ್ಕೂ ಹೆಚ್ಚು ಮಂದಿ ಕಾಣೆಯಾಗಿದ್ದಾರೆ ಎಂದು ವರದಿಗಳು ಹೇಳುತ್ತಿವೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ , ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮೊದಲಾದವರು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.
ಹಿಮಾಲಯದಲ್ಲಿರುವ ಮಚೇಲ್ ಮಾತಾ ಯಾತ್ರೆಯ ಮಾರ್ಗದಲ್ಲಿ ಈ ದುರಂತ ಸಂಭವಿಸಿದೆ. ರಕ್ಷಣಾ ತಂಡಗಳು ತತ್ಕ್ಷಣನೇ ಕಾರ್ಯಪ್ರವೃತ್ತಗೊಂಡು, ಜನರನ್ನು ರಕ್ಷಿಸುವ ಕೆಲಸದಲ್ಲಿ ತೊಡಗಿದರು. ನಾಪತ್ತೆಯಾಗಿರುವವರನ್ನು ಶೋಧಿಸಲಾಗುತ್ತಿದೆ.