ರಾಜಸ್ಥಾನ, ಆ. 27 (DaijiworldNews/AA): ಯುಪಿಎಸ್ಸಿ ಪರೀಕ್ಷೆಯು ಭಾರತದ ಅತ್ಯಂತ ಕಠಿಣ ಪರೀಕ್ಷೆಗಳಲ್ಲಿ ಒಂದಾಗಿದೆ. ಪ್ರತಿ ವರ್ಷ ಲಕ್ಷಾಂತರ ಅಭ್ಯರ್ಥಿಗಳು ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಪ್ರಯತ್ನಿಸುತ್ತಾರೆ, ಆದರೆ ಕೆಲವೇ ಕೆಲವು ಮಂದಿ ಮಾತ್ರ ತಮ್ಮ ಕನಸನ್ನು ನನಸಾಗಿಸಿಕೊಳ್ಳುತ್ತಾರೆ. ಹೀಗೆ ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ತಮ್ಮ ಕನಸನನ್ನು ನನಸಾಗಿಸಿಕೊಂಡವರಲ್ಲಿ ಪೂರ್ವ ಚೌಧರಿ ಕೂಡ ಒಬ್ಬರು.

ಪೂರ್ವಾ ಅವರು ರಾಜಸ್ಥಾನದವರು. ಇವರ ತಂದೆ ಓಂಪ್ರಕಾಶ್ ಅವರು ರಾಜಸ್ಥಾನ ಆಡಳಿತ ಸೇವೆ ಅಧಿಕಾರಿಯಾಗಿದ್ದು, ಕೊಟ್ಪುಟ್ಲಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪೂರ್ವ ಅವರು ಆರಂಭದಿಂದಲೂ ಓದಿನಲ್ಲಿ ಚುರುಕಾಗಿದ್ದರು. ಅವರು ಸೇಂಟ್ ಕ್ಸೇವಿಯರ್ಸ್ನಲ್ಲಿ ಶಾಲಾ ಶಿಕ್ಷಣವನ್ನು ಮುಗಿಸಿ ನಂತರ ದೆಹಲಿ ವಿಶ್ವವಿದ್ಯಾಲಯದ ಲೇಡಿ ಶ್ರೀ ರಾಮ್ ಕಾಲೇಜ್ ಫಾರ್ ವುಮೆನ್ನಿಂದ ಪದವಿ ಪಡೆದರು.
ಪೂರ್ವ ಅವರು ತಮ್ಮ ಕಾಲೇಜು ಶಿಕ್ಷಣದ ವೇಳೆ ಯುಪಿಎಸ್ಸಿ ಪರೀಕ್ಷೆ ಬರೆಯಬೇಕೆಂಬ ಕನಸು ಕಂಡಿದ್ದರು. ಹೀಗಾಗಿ ಅವರು ಪದವಿ ಮುಗಿಸಿದ ಕೂಡಲೇ ಯುಪಿಎಸ್ಸಿ ಪರೀಕ್ಷೆಗೆ ತಯಾರಿ ಆರಂಭಿಸಿದರು.
2024ರಲ್ಲಿ ಯುಪಿಎಸ್ಸಿ ಪರೀಕ್ಷೆ ಬರೆದ ಪೂರ್ವ ಅವರು 533ನೇ ಅಖಿಲ ಭಾರತ ರ್ಯಾಂಕ್ ಗಳಿಸಿ ಉತ್ತೀರ್ಣರಾಗುವಲ್ಲಿ ಯಶಸ್ವಿಯಾಗುತ್ತಾರೆ. ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ನಂತರ ಅವರಿಗೆ ಐಪಿಎಸ್ ಕೇಡರ್ ನೀಡಲಾಯಿತು.