ಮುಂಬಯಿ,ಜ.19 (DaijiworldNews/HR): ಹಿಂದೂ ದೇವರುಗಳ ಬಗ್ಗೆ ಅಪಪ್ರಚಾರ ಮಾಡಿರುವ ಆರೋಪ ಎದುರಿಸುತ್ತಿರುವ ತಾಂಡವ್ ವೆಬ್ಸೀರೀಸ್ನ ನಿರ್ದೇಶಕ ಆಲಿ ಅಬ್ಬಾಸ್ ಜಾಫರ್ ಹಾಗೂ ಬರಹಗಾರ ಗೌರವ್ ಸೋಲಂಕಿ ಅವರ ತಂಡ ಕ್ಷಮೆ ಯಾಚಿಸಿದೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ತಾಂಡವ್ ತಂಡ, “ಇದೊಂದು ಕಾಲ್ಪನಿಕ ಕಥೆಯಾಗಿದ್ದು, ಯಾವುದೇ ಧರ್ಮ, ಜಾತಿ, ಸಮುದಾಯ, ಅಥವಾ ಅವರ ನಂಬಿಕೆಗೆ, ಭಾವನೆಗೆ ಧಕ್ಕೆ ತರುವ ಉದ್ದೇಶವನ್ನು ನಾವು ಹೊಂದಿಲ್ಲ. ಯಾರಿಗಾದರೂ ಇದರಿಂದ ನೋವಾಗಿದ್ದರೆ, ಅದಕ್ಕೆ ನಾವು ಬೇಷರತ್ ಕ್ಷಮೆ ಯಾಚಿಸುತ್ತೇವೆ" ಎಂದು ಹೇಳಿದೆ.
ಒರಿಜಿನಲ್ ಕಂಟೆಂಟ್ಗಾಗಿ ಅಮೇಜಾನ್ ಪ್ರೈಮ್ನ ಭಾರತದ ಮುಖ್ಯಸ್ಥ ಅಪರ್ಣ ಪುರೋಹಿತ್, ನಿರ್ಮಾಪಕ ಹಿಮಾಂಶು ಕೃಷ್ಣ ಮೆಹ್ರಾ ಹಾಗೂ ಇನ್ನಿತರ ಅನಾಮಧೇಯ ವ್ಯಕ್ತಿಗಳ ಮೇಲೆ ಉತ್ತರ ಪ್ರದೇಶದ ಹಜರತ್ ಗಂಜ್ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅಮರ್ ನಾಥ್ ಯಾದವ್ ಅವರು ಎಫ್ಐಆರ್ ದಾಖಲಿಸಿದ್ದು, ಹಿಂದೂ ದೇವರುಗಳನ್ನು ತಪ್ಪಾಗಿ ಚಿತ್ರಿಸಿ ಧಾರ್ಮಿಕ ಸೌರ್ಹಾದಕ್ಕೆ ಧಕ್ಕೆ ತರುವ ಪ್ರಯತ್ನ ನಡೆದಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ತಾಂಡವ್ ತಂಡದ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿತ್ತು.