ಸಿಂದಗಿ,ಅ.25 (DaijiworldNews/HR): ಅಲ್ಪಸಂಖ್ಯಾತರ ಪರ ಇದ್ದೇವೆ ಎಂದು ಹೇಳಿಕೆಗಳನ್ನು ನೀಡುತ್ತಿರುವ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಖಾಲಿ ಡಬ್ಬಾ ಇದ್ದಂತೆ. ಯಾವ ಅಭಿವೃದ್ಧಿಯನ್ನೂ ಮಾಡಿಲ್ಲ, ಯಾರ ಪರವಾಗಿಯೂ ಇಲ್ಲ. ಸುಮ್ಮನೇ ಹೇಳಿಕೆ ನೀಡುತ್ತಿದ್ದಾರೆ" ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, "ಖಾಲಿ ಡಬ್ಬ ಹೆಚ್ಚು ಶಬ್ದ ಮಾಡತ್ತೆ, ಹಾಗೇ ಕಾಂಗ್ರೆಸ್ ನಾಯಕರು ಖಾಲಿ ಡಬ್ಬದಂತೆ ಶಬ್ದ ಮಾಡುತ್ತಿದ್ದಾರೆ ಅಷ್ಟೇ. ಯಾವ ಅಭಿವೃದ್ಧಿಯನ್ನೂ ಮಾಡಿಲ್ಲ ಎಂದರು.
ಇನ್ನು ಪ್ರಧಾನಿ ಮೋದಿ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂದು ಹೇಳಿದರು. ನಾವು ಎಲ್ಲಾ ಜಾತಿ, ಧರ್ಮ, ಸಮುದಾಯಗಳ ಜೊತೆ ಇದ್ದೇವೆ ಯಾರಿಗೂ ತಾರತಮ್ಯ ಮಾಡುವ ಪ್ರಶ್ನೆಯೇ ಇಲ್ಲ. ಆದರೆ ಸಿದ್ದರಾಮಯ್ಯ, ಡಿಕೆಶಿಯವರದ್ದು, ಸಾಬರ್ ಕಾ ಸಾಥ್ ಸಾಬರ್ ಕಾ ವಿಕಾಸ್. ಆದರೂ ಮುಸ್ಲೀಂರ ಬಗ್ಗೆ ಕಾಂಗ್ರೆಸ್ ಗೆ ನಂಬಿಕೆ ಇಲ್ಲ ಮುಸ್ಲಿಂ ಅಭ್ಯರ್ಥಿಯಿಂದ ವೋಟ್ ಡಿವೈಡ್ ಆಗುತ್ತೆ ಎಂಬ ಭಯವಿದೆ ಎಂದಿದ್ದಾರೆ.
ದೇಶದಲ್ಲಿ ರಾಜ್ಯದಲ್ಲಿ ಹಿಂದುತ್ವವಾದಿಗಳು ಬಿಜೆಪಿ ಜೊತೆಗಿದ್ದಾರೆ. ಇದನ್ನು ನಾವು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದೇವೆ" ಎಂದು ಹೇಳಿದ್ದಾರೆ.