ನವದೆಹಲಿ, ಡಿ.19 (Daijiworld/PY): "ಕೇರಳವು ಸಿಎಂ ಪಿಣರಾಯಿ ವಿಜಯನ್ ಅವರ ಆಡಳಿತಲ್ಲಿ ಕಾನೂನುಬಾಹಿರ ಚಟುವಟಿಕೆಗಳ ರಾಜ್ಯವಾಗಿ ಬದಲಾಗುತ್ತಿದೆ" ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, "ಪಕ್ಷದ ಓಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ರಂಜಿತ್ ಶ್ರೀನಿವಾಸನ್ ಅವರನ್ನು ಮೂಲಭೂತವಾದಿಗಳು ಹತ್ಯೆಗೈದಿರುವುದು ಖಂಡನೀಯ. ಈ ರೀತಿಯಾದ ಹೇಡಿತನದ ಕೃತ್ಯಗಳನ್ನು ಸಹಿಸಲಸಾಧ್ಯ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆಡಳಿತದಲ್ಲಿ ಕೇರಳ ಕಾನೂನುಬಾಹಿರ ರಾಜ್ಯವಾಗಿ ಬದಲಾಗುತ್ತಿದೆ. ತಮ್ಮ ಕ್ರೌರ್ಯದಿಂದ ಅವರು ನಮ್ಮನ್ನು ಹೆದರಿಸಲು ಸಾಧ್ಯವಿಲ್ಲ" ಎಂದಿದ್ದಾರೆ.
ಕೇರಳ ಸಿಎಂ ಪಿಣರಾಯಿ ವಿಜಯನ್ ಸಹ ಈ ಘಟನೆಯನ್ನು ಖಂಡಿಸಿದ್ದು, "ಆರೋಪಿಗಳು ಹಾಗೂ ಅವರಿಗೆ ಕುಮ್ಮಕ್ಕು ನೀಡಿದವರನ್ನು ಪೊಲೀಶರು ಶೀಘ್ರವೇ ಬಂಧಿಸಬೇಕು ಹಾಗೂ ಅವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕು" ಎಂದು ತಿಳಿಸಿದ್ದಾರೆ.
ಕೇರಳದ ಆಲಪ್ಪುಳದಲ್ಲಿ ಪಕ್ಷದ ಓಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ರಂಜಿತ್ ಶ್ರೀನಿವಾಸ್ ಅವರನ್ನು ಭಾನುವಾರ ಬೆಳಗ್ಗೆ ಹತ್ಯೆ ಮಾಡಲಾಗಿದ್ದು, ಇದನ್ನು ಜೆ ಪಿ ನಡ್ಡಾ ಖಂಡಿಸಿದ್ದಾರೆ.