ಬೆಂಗಳೂರು, ಜ.02 (DaijiworldNews/PY): "ಕಾಂಗ್ರೆಸ್ ಪಕ್ಷ ಮತಾಂತರದ ಪರವಾಗಿ ಇದೆಯೇ ಎನ್ನುವುದನ್ನು ತಾಕತ್ತಿದ್ದರೆ ಬಹಿರಂಗವಾಗಿ ಸ್ಪಷ್ಟಪಡಿಸಲಿ" ಎಂದು ಬಿಜೆಪಿ ನಾಯಕ ಸಿ ಟಿ ರವಿ ಸವಾಲೆಸೆದಿದ್ದಾರೆ.

"ಸೆಕ್ಯುಲರ್ ಹೆಸರಿನಲ್ಲಿ ಹಿಂದೂಗಳ ಭಾವನೆಗಳಿಗೆ ಧಕ್ಕೆ ಮಾಡುವುದನ್ನು ಸಹಿಸುವುದಿಲ್ಲ. ಕುಂಬಳಕಾಯಿ ಕಳ್ಳ ಎಂದರೆ ಏಕೆ ಹೆಗಲು ಮುಟ್ಟಿಕೊಳ್ಳಬೇಕು?" ಎಂದು ಪ್ರಶ್ನಿಸಿದ್ದಾರೆ.
"ದೇಗುಲದ ಮೇಲಿನ ಪ್ರೀತಿಯಿಂದ ಬ್ರಿಟೀಷರು ನಿಯಂತ್ರಣಕ್ಕೆ ತರಲಿಲ್ಲ. ದೇಗುಲದ ಆದಾಯದ ಮೇಲೆ ಕಟ್ಟಿಟ್ಟು, ಹಿಡಿತಕ್ಕೆ ತೆಗೆದುಕೊಂಡರು. ದೇಗುಲಗಳ ಹಿಡಿತ ಸ್ವಾತಂತ್ರ್ಯ ನೈಜ ಅರ್ಥಕ್ಕೆ ಸರಿಯಲ್ಲ. ಕೆಪಿಸಿಸಿ ಅಧ್ಯಕ್ಷರು ಭಸ್ಮ ಆಗುತ್ತೀರಿ" ಎಂದಿದ್ದಾರೆ.
"ಸುಳ್ಳುಗಳನ್ನು ಹೇಳಿಕೊಂಡು ಪಾದಯಾತ್ರೆ ಮಾಡಬೇಡಿ. ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ. ಕಾಂಗ್ರೆಸ್ ಪಕ್ಷ ಈಗ ಯಾರ ವಿರುದ್ದ ಪಾದಯಾತ್ರೆ ಮಾಡುತ್ತಿದೆ?. ಕಾಂಗ್ರೆಸ್ಸಿಗರು ಯಾವ ಉದ್ದೇಶ ಇಟ್ಟುಕೊಂಡು ಪಾದಯಾತ್ರೆ ಮಾಡುತ್ತಿದ್ದಾರೆ?" ಎಂದು ಪ್ರಶ್ನಿಸಿದ್ದಾರೆ.