ಲಕ್ನೋ, ಫೆ. 20 (DaijiworldNews/AA): ಕ್ರಿಕೆಟ್ ಪಂದ್ಯದ ವೇಳೆ ಜೇನು ದಾಳಿಯಿಂದ ಅನುಭವಿ ಕ್ರಿಕೆಟ್ ಅಂಪೈರ್ ಮಾಣಿಕ್ ಗುಪ್ತಾ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಉನ್ನಾವೊದ ಸಪ್ರು ಕ್ರೀಡಾಂಗಣದಲ್ಲಿ ನಡೆದಿದೆ.

ಮಾಣಿಕ್ ಕಾನ್ಪುರ ಕ್ರಿಕೆಟ್ ಸರ್ಕ್ಯೂಟ್ನಲ್ಲಿ ಗಣ್ಯ ಅಂಪೈರ್ ಆಗಿದ್ದರು. ಕಾನ್ಪುರ ಕ್ರಿಕೆಟ್ ಅಸೋಸಿಯೇಷನ್ನೊಂದಿಗೆ ಸಹ ಸಂಬಂಧ ಹೊಂದಿದ್ದರು. ಪಂದ್ಯ ಮುಗಿಸಿದ ನಂತರ, ಮಾಣಿಕ್ ಪಾನೀಯ ವಿರಾಮದ ಸಮಯದಲ್ಲಿ ಸಹ ಅಂಪೈರ್ ಅವರನ್ನು ಭೇಟಿಯಾಗಲು ಹೋದಾಗ, ಜೇನು ಹಿಂಡು ಇದ್ದಕ್ಕಿದ್ದಂತೆ ಅಲ್ಲಿದ್ದವರ ಮೇಲೆ ದಾಳಿ ಮಾಡಿತು. ಈ ವೇಳೆ ತಪ್ಪಿಸಿಕೊಳ್ಳಲು ಪ್ರಯತ್ನಿಸುವಾಗ, ಮಾಣಿಕ್ ಆಯತಪ್ಪಿ ಬಿದ್ದಿದ್ದಾರೆ. ಅವರಿಗೆ ಜೇನು ಮುತ್ತಿಕೊಂಡು ಕಚ್ಚಿವೆ.
ಮಾಣಿಕ್ ಸುಮಾರು 30 ವರ್ಷಗಳಿಂದ ಅಂಪೈರ್ ಆಗಿದ್ದರು. ರಾಜ್ಯ ಸಮಿತಿಯ ಅಂಪೈರ್ ಕೂಡ ಆಗಿದ್ದರು. ಮಾಣಿಕ್ ಗುಪ್ತಾ ತಮ್ಮ ಇಡೀ ಜೀವನವನ್ನು ಅಂಪೈರಿಂಗ್ ಮತ್ತು ಕುಟುಂಬಕ್ಕಾಗಿ ಮುಡಿಪಾಗಿಟ್ಟವರು. ಅವರು ಕ್ರಿಕೆಟ್ಗೆ ಸಂಪೂರ್ಣವಾಗಿ ಸಮರ್ಪಿತರಾಗಿದ್ದರು. ಮಾಣಿಕ್ ಅವರು ಕಾನ್ಪುರ ಕ್ರಿಕೆಟ್ ಅಸೋಸಿಯೇಷನ್ನ ಸದಸ್ಯರಾಗಿದ್ದರು. ಕಾನ್ಪುರದಲ್ಲಿ ಒಬ್ಬ ವಿಶಿಷ್ಟ ಅಂಪೈರ್ ಆಗಿದ್ದರು.