ಬೆಳ್ತಂಗಡಿ, ಮೇ 14(DaijiworldNews/MS): ಬಂದಾರು ಗ್ರಾಮದ ಬಟ್ಲಡ್ಕ ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ದೋಣಿಗೆ ಅಳವಡಿಸಲಾದ ಡ್ರಜ್ಜಿಂಗ್ ಯಂತ್ರದ ಸಹಾಯದಿಂದ ಮರಳುಗಾರಿಕೆ ನಡೆಸುತ್ತಿದ್ದ ತಂಡದ ವಿರುದ್ದ ಪ್ರಕರಣ ದಾಖಲಿಸಲಾಗಿದೆ.
ಆರೋಪಿಗಳಾದ ಸಂದೇಶ್, ಜಯಂತ್ , ರಕ್ಶಿತ್, ಅವಿನಾಶ್, ಕೇಶವ, ಶರೀಫ್ ಅವರ ವಿರುದ್ದ ಪ್ರಕರಣ ದಾಖಲಾಗಿದೆ. ಆರೋಪಿಗಳು ಡ್ರಜ್ಜಿಂಗ್ ಯಂತ್ರದ ಸಹಾಯದಿಂದ ನದಿಯಿಂದ ಮರಳು ತೆಗೆದು ಸಾಗಾಟ ಮಾಡುತ್ತಿರುವುದು ಕಂಡುಬಂದಿದೆ. ಆರೋಪಿಗಳು ವಶಕ್ಕೆ ಪಡೆದು ವಿಚಾರಿಸಿದಾಗ ಮರಳು ಸಾಗಾಟಕ್ಕೆ ಸಂಬಂಧಿಸಿ ಯಾವುದೇ ದಾಖಲೆ ಪತ್ರಗಳು ಇಲ್ಲದಿರುವುದಾಗಿ ತಿಳಿದುಬಂದಿದೆ.
ಸ್ಥಳದಲಿದ್ದ ದೋಣಿಗೆ ಆಳವಡಿಸಿದ ಡ್ರಜ್ಜಿಂಗ್ ಮೆಷಿನ್, ಕ್ರೇನ್, ಟೋಯಿಂಗ್ ವಾಹನ, ಆಮ್ನಿ ಕಾರು, ದ್ವಿ ಚಕ್ರ ವಾಹನ, ಆಕ್ಟಿವಾ ಬೈಕ್ ಸುಮಾರು 20 ಟನ್ ಮರಳು ಸಹಿತ ಅಂದಾಜು 31,36,000 ರೂ ಗಳ ಸೊತ್ತುಗಳನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ.
ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.