ಮಂಗಳೂರು, ಮೇ.14 (DaijiworldNews/HR): ಕೇಂದ್ರ ಸಚಿವ ಸದಾನಂದ ಗೌಡರಿಗೆ ದಕ್ಷಿಣ ಕನ್ನಡದ ಬಿಜೆಪಿ ಕಾರ್ಯಕರ್ತರೊಬ್ಬರು ಪೋನ್ ಕರೆ ಮಾಡಿ ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದರು ಕೂಡ ಪ್ಯಾಕೇಜ್ ಯಾಕೆ ಘೋಷಣೆಯಾಕಿಲ್ಲ ಎಂದು ಪ್ರಶ್ನಿಸಿದ್ದಾರೆ.
ಪೋನ್ ಕರೆ ಮೂಲಕ ಡಿವಿ ಸದಾನಂದ ಗೌಡರನ್ನು ಸಂಪರ್ಕಿಸಿದ ಬಿಜೆಪಿ ಕಾರ್ಯಕರ್ತ, ಕೇರಳ, ಆಂಧ್ರದಲ್ಲಿ ಬಡವರಿಗೆ ಪ್ಯಾಕೇಜ್ ಘೋಷಣೆ ಆಗಿ, ಅದರ ಉಪಯೋಗವನ್ನು ಬಡವರು ಪಡೆದುಕೊಳ್ಳುತ್ತಿದ್ದಾರೆ, ಆದರೆ ಕರ್ನಾಟಕದಲ್ಲಿ ಪ್ಯಾಕೇಜ್ ಘೋಷಣೆ ಯಾಕೆ ಆಗಲಿಲ್ಲ? ದಯವಿಟ್ಟು ಬಡವರಿಗೆ ಪ್ಯಾಕೇಜ್ ಘೋಷಣೆ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಸದಾನಂದ ಗೌಡ, ನಾವು ಕೇಂದ್ರ ಸರ್ಕಾರದಿಂದ ಎಲ್ಲಾ ರೀತಿಯಲ್ಲಿಯೂ ರಾಜ್ಯಕ್ಕೆ ಪರಿಹಾರ ಕೊಟ್ಟಿದ್ದೇವೆ. ಈ ಕುರಿತು ನಿಮ್ಮ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅವರಿಗೆ ಪ್ರಶ್ನೆ ಮಾಡಿ, ಅವರನ್ನು ಸಂಪರ್ಕಿಸಿ ಅವರೊಂದಿಗೆ ಮಾತನಾಡಿ" ಎಂದಿದ್ದಾರೆ.
ಇನ್ನು "ಕೇಂದ್ರದಿಂದ ಕೊರೊನಾಗೆ ಬೇಕಾದ ಎಲ್ಲಾ ರೀತಿಯ ಪರಿಹಾರಗಳನ್ನು ರಾಜ್ಯ ಸರ್ಕಾರಗಳಿಗೆ ನೀಡುತ್ತಿದ್ದೇವೆ. ನಿಮ್ಮ ರಾಜ್ಯದ ನಾಯಕರು ಏನು ಮಾಡುತ್ತಿದ್ದಾರೆ, ನೀವು ಮೊದಲಿಗೆ ಅವರನ್ನು ಸಂಪರ್ಕಿಸಿ ಮಾತನಾಡಿ. ಈ ಬಗ್ಗೆ ನಾನು ಕೂಡ ವಿಚಾರಣೆ ನಡೆಸುತ್ತೇನೆ" ಎಂದು ಹೇಳಿದ್ದಾರೆ.