ಕಲಬುರಗಿ, ಅ 22 (DaijiworldNews/HR): ಕಲಬುರಗಿ ಜಿಲ್ಲೆಯ ಶಹಬಾದ್ ಪಟ್ಟಣದಲ್ಲಿ ಜೆ.ಪಿ.ಸಿಮೆಂಟ್ ಕಾರ್ಖಾನೆ ದೀಪಾವಳಿ ಬೋನಸ್ ನೀಡಿಲ್ಲ ಎಂದು ಕಾರ್ಮಿಕನೋರ್ವ ಟವರ್ ಏರಿ ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ.
ಟವರ್ ಏರಿ ಪ್ರತಿಭಟನೆ ನಡೆಸಿದ ಕಾರ್ಮಿಕನನ್ನು ಮೊಹಮ್ಮದ್ ರಶೀದ್ ಎಂದು ಗುರುತಿಸಲಾಗಿದೆ.
ಕಾರ್ಖಾನೆಯ ನಿಯಮ ಪ್ರಕಾರ ಬೋನಸ್ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ರಶೀದ್ ಬೋನಸ್ ನೀಡುವವರೆಗೂ ಕೆಳಗಿಳಿಯಲ್ಲ ಎಂದು ಪ್ರತಿಭಟನೆ ನಡೆಸಿದ್ದಾರೆ ಎನ್ನಲಾಗಿದ್ದು, ಈ ಪೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.